ಉದನೆ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

0

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಸೈಂಟ್ ಆಂಟನೀಸ್ ಪ್ರೌಢಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಆಂಗ್ಲಮಾಧ್ಯಮ ವಿಭಾಗ ಜಂಟಿ ಆಶ್ರಯದಲ್ಲಿ ನಡೆದ ಕ್ರೀಡಾಕೂಟವನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ಎಸ್.ಗೌಡ ಅವರು ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಪಳಗಿದ ಕ್ರೀಡಾಪಟುಗಳು ಮುಂದೆ ದೇಶದ ಕೀರ್ತಿಯನ್ನು ಬೆಳಗುವ ಕ್ರೀಡಾಪಟುಗಳಾಗಬೇಕೆಂದು ಹೇಳಿ ಶುಭ ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್‌ರವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಸೈಂಟ್ ಆಂಟನೀಸ್ ಪ್ರೌಢಶಾಲೆಯ ಮುಖ್ಯಗುರು ಶ್ರೀಧರ ಗೌಡ, ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ಮುಖ್ಯಗುರು ಸಿಬಿಚ್ಚನ್ ಟಿ.ಸಿ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿಮ್ಸನ್ ವೇದಿಕೆಯಲ್ಲಿ ಉಪಸ್ಥಿರಿದ್ದರು. ಕ್ರೀಡಾ ನಾಯಕ ಅಭೀಷ್‌ರವರು ಕ್ರೀಡಾ ಪಟುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಕ್ರೀಡಾ ಸಾಧಕಿ ಆಶ್ಲಿ ಕೆ ಏಲಿಯಾಸ್ ಕ್ರೀಡಾ ಜ್ಯೋತಿ ಹೊತ್ತು ಸಾಗಿದರು. ಶಿಕ್ಷಕರಾದ ಯಶೋಧರ ಕೆ.ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಜಿಮ್ಸನ್ ವರ್ಗಿಸ್ ಸ್ವಾಗತಿಸಿ, ರಾಜೇಶ್ ರೈ ವಂದಿಸಿದರು. ಎರಡೂ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಗಳು ತೀರ್ಪುಗಾರರಾಗಿ ಸಹಕರಿಸಿದರು.

LEAVE A REPLY

Please enter your comment!
Please enter your name here