ಸತ್ಯಸಾಯಿ ಮಂದಿರದಲ್ಲಿ ಕಣ್ಣಿನ ಉಚಿತ ನೇತ್ರ ಚಿಕಿತ್ಸಾ ಶಿಬಿರ – ಉಚಿತ ಕನ್ನಡಕ ವಿತರಣೆ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಮತ್ತು ಎ.ಜೆ.ಆಸ್ಪತ್ರೆ ಮಂಗಳೂರು (ಕಣ್ಣಿನ ವಿಭಾಗ) ಇದರ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಡಿ.18 ರಂದು ಸತ್ಯಸಾಯಿ ಮಂದಿರ ವಠಾರದಲ್ಲಿ ನಡೆಯಿತು. ಶಿಬಿರದಲ್ಲಿ ಅವಶ್ಯವಿರುವವರಿಗೆ ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು.


ಸತ್ಯಸಾಯಿ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಪ್ರಸನ್ನ ಬಿ ಭಟ್ ಶಿಬಿರವನ್ನು ಉದ್ಘಾಟಿಸಿದರು. ಪದ್ಮನಾಭ ನಾಯಕ್ ಅವರು ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಅವರು ಶಿಬಿರಾರ್ಥಿಗಳಿಗೆ ಕಣ್ಣಿನ ಚಿಕಿತ್ಸೆ ಮತ್ತು ಮುಂಜಾಗ್ರತೆ ಕುರಿತು ಮಾಹಿತಿ ನೀಡುವ ಮೂಲಕ ಸ್ವಾಗತಿಸಿದರು. ಆಧ್ಯಾತ್ಮಿಕ ಸಂಯೋಜಕ ಚಿತ್ರಾ ರೈ ಪ್ರಾರ್ಥಿಸಿದರು. ಮಧುಸೂದನ್ ವಂದಿಸಿದರು. ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ರಘುನಾಥ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here