ಬಡಗನ್ನೂರು ಶಾಲಾ ಶಿಕ್ಷಕ ಜನಾರ್ದನ ದುರ್ಗ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

0

ನಿಡ್ಪಳ್ಳಿ; ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಹಾಗು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಡಗನ್ನೂರು ಶಾಲಾ ಶಿಕ್ಷಕ ಜನಾರ್ದನ ದುರ್ಗ ಎತ್ತರ ಜಿಗಿತದಲ್ಲಿ ದ್ವಿತೀಯ, 4×100 ಮೀಟರ್ ರಿಲೆ ಸ್ಪರ್ಧೆಯಲ್ಲಿ  ದ್ವಿತೀಯ ಹಾಗೂ ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆ ಜ.15, 16 ರಂದು ತುಮಕೂರಿನಲ್ಲಿ ನಡೆಯಲಿದೆ.
    ಅಲ್ಲದೆ 110 ಮೀಟರ್ ಹರ್ಡಲ್ಸ್ ನಲ್ಲಿ ತೃತೀಯ ಹಾಗೂ  ಜನಪದ ಗೀತೆ ( ಗುಂಪು) ತೃತೀಯ ಸ್ಥಾನ ಪಡೆದಿರುತ್ತಾರೆ.
    ಇವರು ನಿಡ್ಪಳ್ಳಿ ಗ್ರಾಮದ ದುರ್ಗ ನಿವಾಸಿಯಾಗಿದ್ದು  ಬಡಗನ್ನೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಗ್ಲ ಭಾಷಾ ಜಿ.ಪಿ.ಟಿ ಶಿಕ್ಷಕರಾಗಿ‌ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here