ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ( ಸಂಘಟನೆ) ಬಿ.ಎಲ್ ಸಂತೋಷ್ ಭೇಟಿ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಜೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್ ಸಂತೋಷ್ ಅವರು ಡಿ.19 ರಂದು ಭೇಟಿ ನೀಡಿದರು.

ಬೆಳಿಗ್ಗೆ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಮಾಡಿ ಬಳಿಕ ದೇವಳದ ಅಭಿವೃದ್ದಿ ಕುರಿತು ದೇವಳದ ವ್ಯವಸ್ಥಾಪನಾ ಸಮಿತಿಯವರೊಂದಿಗೆ ಮಾಹಿತಿ ಪಡೆದು ಕೊಂಡರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಡಾ.ಸುಧಾ ಎಸ್ ರಾವ್, ವೀಣಾ ಬಿ.ಕೆ, ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ, ಬಿ.ಐತ್ತಪ್ಪ ನಾಯ್ಕ್, ಶೇಖರ್ ನಾರಾವಿ, ದಿಶಾ ಸಮಿತಿ ಸದಸ್ಯ ರಾಮದಾಸ್‌ ಹಾರಾಡಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಸತ್ಯಧರ್ಮ ನಡೆಯಲ್ಲಿ‌ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಅವರು ಶಾಲು ಹೊದೆಸಿ ಗೌರವಿಸಿದರು.

LEAVE A REPLY

Please enter your comment!
Please enter your name here