ತುಳುಕೂಟೊ ಪುತ್ತೂರು ಸುವರ್ಣ ವರ್ಷದ ಉದ್ಘಾಟನೆ ಹಾಗೂ ತಾಲೂಕು ತುಳುವರ ಮೇಳೊದ ಆಮಂತ್ರಣ ಡಾ. ಹೆಗ್ಗಡೆಯವರಿಂದ ಬಿಡುಗಡೆ

0

ಧರ್ಮಸ್ಥಳ: ತುಳುಕೂಟೊ ಪುತ್ತೂರು ಇದರ ಸುವರ್ಣ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಪುತ್ತೂರು ತಾಲೂಕು ತುಳುವೆರೆ ಮೇಳೊ 2023 ಇದರ ಆಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರು ತಮ್ಮ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡಕೊಂಡ ಅವರು ಯಶಸ್ಸಿಗೆ ಶುಭ ಕೋರಿದರು. ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ ಮತ್ತು ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಡಾ. ಹೆಗ್ಗಡೆಯವರನ್ನು ಗೌರವಿಸಿದರು. ಸಮ್ಮೇಳನ ಸಮಿತಿಯ ಸಂಚಾಲಕ ಹಾಗೂ ತುಳುಕೂಟೊದ ಅಧ್ಯಕ್ಷ ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್, ಉಪಾಧ್ಯಕ್ಷರುಗಳಾದ ಸಂತೋಷ್ ಶೆಟ್ಟಿ ಎಸ್. ಮತ್ತು ಹೀರಾ ಉದಯ್, ಜತೆಕಾರ್ಯದರ್ಶಿ ನಯನಾ ರೈ ನೆಲ್ಲಿಕಟ್ಟೆ, ಪ್ರಚಾರದ ವ್ಯವಸ್ಥಾಪಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here