ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಆರೋಪ; ಉಪವಲಯ ಅರಣ್ಯಾಧಿಕಾರಿಯ ವಿರುದ್ದ ವಿ.ಹಿಂ.ಪ ದೂರು

0

ಪುತ್ತೂರು ಅರಣ್ಯ ಇಲಾಖಾ ಕಛೇರಿಯ ಎದುರು ಪ್ರತಿಭಟನೆಗೆ ಸಿದ್ದತೆ

ಕಡಬ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದಲ್ಲಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ಕಡಬ ವಿ.ಹಿಂ.ಪ, ಬಜರಂಗದಳ ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಮಾಡಲು ಸಿದ್ದತೆ ನಡೆಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಹಿಂದೂ ವಿರೋಧಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ, ಸಾಮಾಜಿಕ ಶಾಂತಿ ಕದಡಿದ ಬಗ್ಗೆ ಕಡಬ ವಿ.ಹಿಂ.ಪ.ನ ಕಾರ‍್ಯದರ್ಶಿ ಪ್ರಮೋದ್ ರೈ ನಂದುಗುರಿ ಅವರು ದೂರು ನೀಡಿದ್ದಾರೆ. ಅವರು ನೀಡಿರುವ ದೂರಿನಲ್ಲಿ, ಭಜನೆ ಎಂಬುದು ಜನ ಸಾಮಾನ್ಯರ ಭಕ್ತಿ ಮಾರ್ಗ, ಜನಸಾಮಾನ್ಯರು ಅತ್ಯಂತ ಶ್ರದ್ದೆ, ಭಕ್ತಿಯಿಂದ ಆಚರಿಸಿಕೊಂಡು ಬರುತ್ತಿರುವ ಈ ಭಜನೆಯ ಬಗ್ಗೆ ದಿನಾಂಕ: 20-12-2022ರಂದು ಒಬ್ಬ ಸರಕಾರಿ ಅಧಿಕಾರಿ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಪಾಡುವಂತಹ ವ್ಯಕ್ತಿಯಾದ ಸಂಜೀವ ಪೂಜಾರಿ ಇವರು ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣವಾದಲ್ಲಿ ಅವಹೇಳನಕಾರಿಯಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ. ಈ ವ್ಯಕ್ತಿ ಹಿಂದೆಯೂ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದು ಒಬ್ಬ ಸಾಮಾಜಿಕ ಜವಾಬ್ದಾರಿಯನ್ನು ಹೊಂದಿರುವ ವ್ಯಕ್ತಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಾ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದ್ದು ಇವರ ವಿರುದ್ದ ಪ್ರಕರಣ ದಾಖಲಿಸಬೇಕು ಅಲ್ಲದೆ ಕರ್ತವ್ಯದಿಂದ ವಜಾ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಪುತ್ತೂರಿನಲ್ಲಿ ಪ್ರತಿಭಟನೆ:

ಕಾಣಿಯೂರು ಭಾಗದ ನಿವಾಸಿಯಾಗಿರುವ ಸಂಜೀವ ಪೂಜಾರಿ ಅವರು ಉಪವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿನ್ನಲೆಯಲ್ಲಿ ಅವರ ಅಮಾನತಿಗೆ ಆಗ್ರಹಿಸಿ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ.

LEAVE A REPLY

Please enter your comment!
Please enter your name here