ಉಪ್ಪಿನಂಗಡಿಯಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ-ಕಚೇರಿ ಉದ್ಘಾಟನೆ

0

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಜ. 13ರಿಂದ 17ರ ತನಕ ನಡೆಯಲಿರುವ ಅಖಿಲ ಭಾರತ ಅಂತರ ವಿಶ್ವ ವಿದ್ಯಾನಿಲಯ‌ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಕಚೇರಿ ಡಿ. 16ರಂದು ಉದ್ಘಾಟನೆಗೊಂಡಿತು.

ಶಾಸಕ ಸಂಜೀವ ಮಠಂದೂರು ಕಚೇರಿ ಉದ್ಘಾಟಿಸಿ ಮಾತನಾಡಿ ದೇಶದ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳ ಶ್ರೇಷ್ಠ ಕ್ರೀಡಾಪಟುಗಳು ಭಾಗವಹಿಸುವ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಸರ್ವರೂ ಶ್ರಮಪಟ್ಟು ಕಾರ್ಯೋನ್ಮುಖರಾಗಬೇಕು ಎಂದರು.

ಕ್ರೀಡಾ ಕೂಟದ ಸಂಘಟನಾ ಕಾರ‍್ಯದರ್ಶಿ, ಮಂಗಳೂರು ವಿಶ್ವ ವಿದ್ಯಾನಿಲಯದ ಶಾರೀರಿಕ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಪಿಂಟೋ ಕ್ರೀಡಾಕೂಟ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುಬ್ಬಪ್ಪ ಕೈಕಂಬ ಮಾತನಾಡಿ ಪಂದ್ಯಾಟದ ಪೂರ್ವ ತಯಾರಿ ಮತ್ತು ಈಗಾಗಲೇ ಆಗಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿ ಕಾರ‍್ಯಕ್ರಮದ ಯಶಸ್ವಿಗೆ ಸಹಕಾರ ಕೋರಿದರು.

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಸ್ಥಳೀಯ ಪ್ರಮುಖರಾದ ಸುನಿಲ್ ಕುಮಾರ್ ದಡ್ಡು, ಮುಕುಂದ ಬಜತ್ತೂರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here