ಕಾಣಿಯೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ- ಸ್ವಚ್ಚತ್ತಾ ಕಾರ್ಯಕ್ರಮ: ೨೦೦ ಮೀಟರ್ ಟ್ರ್ಯಾಕ್ ನಿರ್ಮಾಣ ಮಾಡಲು ನಿರ್ಧಾರ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ವಿದ್ಯಾರ್ಥಿ ಸಂಘದ ಸಮಾಲೋಚನಾ ಸಭೆ ಮತ್ತು ಶಾಲಾ ಸುತ್ತ ಮುತ್ತ ಸ್ವಚ್ಚತ್ತಾ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಶ್ಯಕತೆಯಿರುವ ಶಾಲಾ ಮೈದಾನದಲ್ಲಿ ೨೦೦ ಮೀಟರ್ ಟ್ರ್ಯಾಕ್ ನಿರ್ಮಾಣ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಕಾಣಿಯೂರು ಗ್ರಾ.ಪಂ. ಸದಸ್ಯರಾದ ವಸಂತ ಪೆರ್ಲೋಡಿ, ಬೆಳಂದೂರು ಗ್ರಾ.ಪಂ. ಸದಸ್ಯ ವಿಠಲ ಗೌಡ ಅಗಳಿ, ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಯಶೋದಾ ನೇರೊಳ್ತಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಲಕ್ಷ್ಮಣ ಗೌಡ ಮುಗರಂಜ, ವಸಂತ ಗೌಡ ಕಂಪ, ಮಾಧವ ಗೌಡ ಕಟ್ಟತ್ತಾರು, ಕೋಶಾಧಿಕಾರಿ ರಾಜೇಶ್ ಮೀಜೆ, ಜತೆ ಕಾರ್ಯದರ್ಶಿ ಯಶಕಲಾ ಮುಗರಂಜ, ಕಲ್ಪಡ ಕೊಡಿಯಾಲ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್‌ನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ ಕಲ್ಪಡ ಹಾಗೂ ಎಸ್‌ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here