ಆತೂರು ಶ್ರೀ ಸದಾಶಿವ ದೇವಸ್ಥಾನದ ಕಲ್ಯಾಣ ಮಂಟಪಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ.ದೇಣಿಗೆ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಂದಾಜು 2ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ರೂ.5 ಲಕ್ಷ ದೇಣಿಗೆ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶೀನಪ್ಪ ಗೌಡ ವಳಕಡಮರವರು ದೇಣಿಗೆ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ವಿನಯ ರೈ ಕೊಯಿಲಪಟ್ಟೆ, ಎಸ್.ಆರ್.ಕೆ. ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here