ಪೆರ್ನಾಜೆ ಶ್ರೀ ಸೀತಾರಾಘವ ವಿದ್ಯಾಲಯದಲ್ಲಿ ಕ್ರೀಡೋತ್ಸವ

0

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ವಿದ್ಯಾಲಯದಲ್ಲಿ ಕ್ರೀಡೋತ್ಸವ ಡಿ.17ರಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶಂಕರನಾರಾಯಣ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿದ್ಯಾರ್ಥಿಗಳಿಂದ ಗೌರವ ಸ್ವೀಕರಿಸಿದ ಮಾಡನ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಪಂಚಾಯತ್ ಸದಸ್ಯರಾದ ಚಂದ್ರಹಾಸ, ಸುದಾನ ವಸತಿಯುತ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪುಷ್ಪರಾಜ್, ಸಂಸ್ಥೆಯ ಆಡಳಿತ ಮಂಡಳಿ ಕೋಶಾಧಿಕಾರಿ ರಾಮಚಂದ್ರ ಭಟ್ ಶುಭ ಹಾರೈಸಿದರು. ಆಡಳಿತ ಮಂಡಳಿ ಕಾರ್ಯದರ್ಶಿ ಕೊಚ್ಚಿ ಕೃಷ್ಣಪ್ರಸಾದ್, ಕಾಲೇಜಿನ ಪ್ರಾಂಶುಪಾಲ ಮಂಟ್ಯಯ್ಯ ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯಗುರು ಸುಜಾತ ಸ್ವಾಗತಿಸಿ, ಅತಿಥಿ ಉಪನ್ಯಾಸಕ ಸುಪ್ರಿತ್ ಎಮ್.ಎಸ್ ವಂದಿಸಿದರು.

LEAVE A REPLY

Please enter your comment!
Please enter your name here