ಗಡಿನಾಡ ಗ್ರಾಮ ಸಾಹಿತ್ಯ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಪಾಣಾಜೆ ವಿದ್ಯಾವರ್ಧಕ ಸಂಘ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್, ಗ್ರಾಮ ಪಂಚಾಯತ್ ಪಾಣಾಜೆ, ಸುಬೋಧ ಪ್ರೌಢಶಾಲೆ ಪಾಣಾಜೆ ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು, ಇವರ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ ಇದರ ಅಡಿಯಲ್ಲಿ ಡಿಸೆಂಬರ್ 31 ರಂದು ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ನಡೆಯಲಿರುವ ಗಡಿನಾಡ ಗ್ರಾಮ ಸಾಹಿತ್ಯ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸುಬೋಧ ಪ್ರೌಢಶಾಲೆಯನಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬೂಬಕ್ಕರ್ ಇಬ್ರಾಹಿಂ ಬಿಡುಗಡೆಗೊಳಿಸಿದರು. ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆಯನ್ನು ವಹಿಸಿದರು.

ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟಿನ ಅಧ್ಯಕ್ಷರಾದ ಡಾ ಹಾಜಿ ಎಸ್ ಅಬೂಬಕರ್ ಆರ್ಲಪದವು ಸಮಾರಂಭದ ರೂಪುರೇಷೆಗಳನ್ನು ವಿವರಿಸಿ ಸರ್ವ ರೀತಿಯ ಸಹಕಾರವನ್ನು ಕೋರಿದರು ಸುಬೋಧ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀಪತಿ ಭಟ್ ಸರ್ವರನ್ನು ಸ್ವಾಗತಿಸಿದರು ವೇದಿಕೆಯಲ್ಲಿ ಹಿರಿಯ ಕೃಷಿಕರಾದ ರಾಮಚಂದ್ರ ಭಟ್ ಕಡಂದೇಲು, ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ಮೈಮುನತುಲ್ ಮೆಹರಾ, ಸುಲೋಚನಾ, ವಿಮಲಾ, ಕೃಷ್ಣಪ್ಪ ಪೂಜಾರಿ, ಶಾಲಾ ಶಿಕ್ಷಕರುಗಳಾದ ನಿರ್ಮಲ ,ಶಾರದ, ಕೀರ್ತಿ ಸುಬ್ರಹ್ಮಣ್ಯ ಮತ್ತು ವಿನುತ ಉಪಸ್ಥಿತರಿದ್ದರು ಚಿಗುರೆಲೆ ಸಾಹಿತ್ಯ ಬಳಗದ ನಾರಾಯಣ ಕುಂಬ್ರ ಮತ್ತು ಚಂದ್ರಮೌಳಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here