ನರೇಂದ್ರ ಪಪೂ ಕಾಲೇಜಿನ ವಿದ್ಯಾರ್ಥಿಗಳಿಂದ ಕುರಿಯ ಉಳ್ಳಾಲ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತೆ

0

ಪುತ್ತೂರು: ಕುರಿಯ ಉಳ್ಳಾಲ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ 14ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುರಿಯ ಉಳ್ಳಾಲ ವಿಷ್ಣು ಸೇವಾ ಸಮಿತಿ ಸಹಕಾರದೊಂದಿಗೆ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ದೇವಸ್ಥಾನದ ಅಧ್ಯಕ್ಷ ಮಧು ನರಿಯೂರು ಮಾತನಾಡಿ ಸ್ವಚ್ಛತೆ ಎಂಬುದು ಭಾರತೀಯ ಸಂಸ್ಕೃತಿಯ ಒಂದು ಅಂಗವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿರವರಿಂದ ಇಡೀ ದೇಶವೇ ಮತ್ತೊಮ್ಮೆ ಸ್ಪೂರ್ತಿ ಪಡೆದುಕೊಂಡು ಸ್ವಚ್ಛ ದೇಶವಾಗುತ್ತ ಕಾಲಿಡುತ್ತಿದೆ ಎಂದು ಹೇಳಿದರು.

ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ತಿರುಮಲೇಶ್ವರ ಭಟ್, ಶ್ರೀಕೃಷ್ಣ ಬೊಳಂತಿಮಾರು, ಗ್ರಾಮಸ್ಥರಾದ ಪ್ರೀತಮ್ ಮತ್ತು ವಿನ್ಯಾಸ್, ಗ್ರಾಮವಿಕಾಸ ಸಮಿತಿಯ ಸಂಯೋಜಕರಾದ ಸತೀಶ್, ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here