ಪೊಲೀಸ್‌ ಇಲಾಖೆಯ ಉಪವಿಭಾಗದಲ್ಲಿ ಬದಲಾವಣೆ- ಸರಕಾರದ ಆದೇಶ

0

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಉಪವಿಭಾಗಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಠಾಣೆಗಳ ಸಂಖ್ಯೆಯನ್ನು ಉಪವಿಭಾಗಗಳಲ್ಲಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಸರಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉಪವಿಭಾಗಳಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪವಿಭಾಗದಲ್ಲಿ ಬದಲಾವಣೆ ಮಾಡಲಾಗಿದ್ದು ನೂತನವಾಗಿ ಬೆಳ್ತಂಗಡಿ ಉಪವಿಭಾಗವನ್ನು ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಉಪವಿಭಾಗಗಳ ಪೊಲೀಸ್‌ ಠಾಣೆಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. 

LEAVE A REPLY

Please enter your comment!
Please enter your name here