ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜ್ಹೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ ‘ಪಂಚಾಯತ್ ರಾಜ್ ಸಂಸ್ಥೆ ಮತ್ತು ಸ್ವ ಸಹಾಯ ಸಂಘಗಳ ಒಗ್ಗೂಡಿಸುವಿಕೆ’ ‘ಸಾಂಘಿಕ ನಡೆ ಸಮೃದ್ಧಿಯ ಕಡೆ’ ಕುರಿತು ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ಮತ್ತು ಸ್ವ ಸಹಾಯ ಸಂಘ/ ಒಕ್ಕೂಟದ ಸದಸ್ಯರುಗಳಿಗೆ ಒಂದು ದಿನದ ಮುಖಾ ಮುಖಿ ತರಬೇತಿ ಶಿಬಿರ ಡಿ.27 ರಂದು ಪುತ್ತೂರು ತಾಲೂಕು ಪಂಚಾಯತ್ ಕಿರು ಸಭಾಂಗಣದಲ್ಲಿ ನಡೆಯಿತು.
ತಾ.ಪಂ ಯೋಜನಾಧಿಕಾರಿ ಸುಕನ್ಯ, ಅಬ್ದುಲ್ ನಜ್ಹೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮಹಮ್ಮದ್ ಬಡಗನ್ನೂರು, ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಮತ್ತು ಹಿರೇಬಂಡಾರಿ ಗ್ರಾ.ಪಂ ಅಧ್ಯಕ್ಷೆ ಚಂದ್ರಾವತಿ ಅವರು ತರಬೇತಿ ಶಿಬಿರವನ್ನು ಉದ್ಘಾಟಿಸಿದರು.