ಪೆರಾಬೆ: ವಿಕಲಚೇತನರ ಸಮನ್ವಯ ಗ್ರಾಮಸಭೆ

0

ಪೆರಾಬೆ: ವಿಕಲಚೇತನರ ಸಮನ್ವಯ ಗ್ರಾಮ ಸಭೆ ಡಿ.27ರಂದು ಪೆರಾಬೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಪೆರಾಬೆ ಗ್ರಾ.ಪಂ.ಅಧ್ಯಕ್ಷ ಮೋಹನದಾಸ್ ರೈ ಅಧ್ಯಕ್ಷತೆ ವಹಿಸಿದ್ದರು.

ವಿಕಲಚೇತನರ ಶೇ.5ರ ಅನುದಾನದ ಮಾಹಿತಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿಯವರು ನೀಡಿದರು. ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮುತ್ತಪ್ಪರವರು ವಿಕಲಚೇತನರ ಇಲಾಖೆಯ ಸೌಲಭ್ಯಗಳ ಮಾಹಿತಿ ನೀಡಿದರು. ಕೆನರಾ ಬ್ಯಾಂಕ್‌ನ ಎಫ್‌ಎಲ್‌ಸಿ ಅಧಿಕಾರಿ ಗೀತಾ ಅವರು ವಿಮಾ ಸೌಲಭ್ಯ ಮತ್ತು ಪಿಂಚಣಿಯ ಕುರಿತು ಮಾಹಿತಿ ನೀಡಿದರು. ಬಿಆರ್‌ಸಿ ವಿಶೇಷ ಶಿಕ್ಷಕಿ ಶಶಿಕಲಾರವರು ನಿರಾಮಯ ಯೋಜನೆಯ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪೆರಾಬೆ ಗ್ರಾ.ಪಂ.ಅಧ್ಯಕ್ಷ ಮೋಹನದಾಸ್ ರೈಯವರು ವಿಕಲಚೇತನರ ಅನುದಾನವನ್ನು ವಿಕಲಚೇತನರು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು. ಗ್ರಾ.ಪಂ.ಉಪಾಧ್ಯಕ್ಷೆ ಸಂಧ್ಯಾ, ಸದಸ್ಯರಾದ ಮಮತ, ಸಮುದಾಯ ಆರೋಗ್ಯಾಧಿಕಾರಿಗಳಾದ ದಯಾನಂದ, ರಮ್ಯ, ಆರೋಗ್ಯ ಸಹಾಯಕಿ ಲೀಲಾವತಿ, ಅಂಗನವಾಡಿ ಕಾರ್ಯಕರ್ತೆ ವಿಶಾಲಕ್ಷಿ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳು ಮತ್ತು ಆಲಂಕಾರು ಗ್ರಾ.ಪಂ.ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋನಪ್ಪ ಸಹಕರಿಸಿದರು. ಪೆರಾಬೆ ಗ್ರಾ.ಪಂ.ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮುತ್ತಪ್ಪ ಸ್ವಾಗತಿಸಿದರು. ಅಭಿವೃದ್ಧಿ ಅಧಿಕಾರಿ ಶಾಲಿನಿ ವಂದಿಸಿದರು.

LEAVE A REPLY

Please enter your comment!
Please enter your name here