ಡಿ.29 : ನೆಲ್ಯಾಡಿಯಲ್ಲಿ ‘ವಿನೋದ’ ಸೈಕಲ್ಸ್, ಟಯರ್‍ಸ್ ಶುಭಾರಂಭ

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪ ಕೌಕ್ರಾಡಿ ಗ್ರಾಮದ ಹೊಸಮಜಲು ಎಂಬಲ್ಲಿ ‘ವಿನೋದ ‘ ಸೈಕಲ್ಸ್ ಮತ್ತು ಟಯರ್‍ಸ್ ಮಾರಾಟ ಮಳಿಗೆ ಡಿ.29 ರಂದು ಬೆಳಿಗ್ಗೆ ಶುಭಾರಂಭಗೊಳ್ಳಲಿದೆ.

ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್ ಉದ್ಘಾಟಿಸಲಿದ್ದಾರೆ. ನೆಲ್ಯಾಡಿ ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಅಧ್ಯಕ್ಷ ವೆಂಕಟ್ರಮಣ ಆರ್., ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜು ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ., ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ, ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್, ಪುತ್ತೂರು ತಾಲೂಕು ಶಿವಳ್ಳಿ ಸಂಪದ ಉಪಾಧ್ಯಕ್ಷ ಸತೀಶ್ ಕೆ.ಎಸ್.ದುರ್ಗಾಶ್ರೀ, ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಐಐಸಿಟಿ ಕಂಪ್ಯೂಟರ್‍ಸ್‌ನ ಪ್ರಶಾಂತ್ ಸಿ.ಹೆಚ್.ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇಲ್ಲಿ ಸೈಕಲ್ ಸೇಲ್ಸ್ ಮತ್ತು ಸರ್ವೀಸ್, ವೆಹಿಕಲ್ ಟಯರ್ ಸೇಲ್ಸ್ ಮತ್ತು ಸರ್ವೀಸ್, ಟಯರ್ ಪಂಕ್ಚರ್ ವರ್ಕ್ಸ್ ಸೇವೆ ಇದೆ ಎಂದು ಮಾಲಕ ಶಾಂತರಾಮ ಶೆಟ್ಟಿ ಪಡ್ಡಡ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here