ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು ಚಂದ್ರಶೇಖರ ಗೌಡ ಮೃತ್ಯು

0

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕದಿಂದ ವರದಿಯಾಗಿದೆ. ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56 ವ) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಇವರು ದ.29 ರಂದು ಬೆಳಿಗ್ಗೆ ತನ್ನ ಅಡಿಕೆ ತೋಟದಲ್ಲಿ ಅಡಿಕೆ ತೆಗೆಯಲೆಂದು ಮರ ಹತ್ತಿದ್ದರು ಈ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ಮರ ಸಮೇತ ಚಂದ್ರಶೇಖರ ಗೌಡರವರು ನೆಲಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಶ್ರೀಮತಿ, ಸಹೋದರರಾದ ವಿಶ್ವನಾಥ ಮತ್ತು ಜನಾರ್ದನ, ಸಹೋದರಿ ಭವಾನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here