ರಾಮಕುಂಜ ಪ.ಪೂ. ಕಾಲೇಜಿನಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದಲ್ಲಿ ವೃಂದಾವನಸ್ಥ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ ಕಾರ್ಯಕ್ರಮ ಡಿ.29ರಂದು ನಡೆಯಿತು.


ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ.,ರವರು ಮಾತನಾಡಿ, ಶ್ರೀ ವಿಶ್ವೇಶತೀರ್ಥ ಶ್ರೀಪಾದರು ರಾಮಕುಂಜ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ವಿಶ್ವವಿಖ್ಯಾತರಾದವರು. ಇವರ ಸಮಾಜಮುಖೀ ಕಾರ್ಯಗಳ ಫಲವಾಗಿಯೇ ಇಂದು ನಮ್ಮಂಥಹ ಅನೇಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ಪೂಜ್ಯರ ಅನುಗ್ರಹದಿಂದಲೇ ಇವೆಲ್ಲವೂ ಸಾಧ್ಯವಾಗಿವೆ. ಕೃಷ್ಣೈಕ್ಯರಾದ ಶ್ರೀಗಳವರನ್ನು ಸದಾ ನಾವು ಸ್ಮರಿಸಬೇಕು, ಅವರ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು. ಪ್ರೌಢಶಾಲಾ ಮುಖ್ಯಸ್ಥರಾದ ಸತೀಶ್ ಭಟ್, ಅಧ್ಯಾಪಕ-ಅಧ್ಯಾಪಕೇತರವೃಂದದವರು, ವಿದ್ಯಾರ್ಥಿಗಳು ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.

LEAVE A REPLY

Please enter your comment!
Please enter your name here