ಬೆಳ್ಳಿಪ್ಪಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಟಿ ಉತ್ಸವ

0

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.28 ಮತ್ತು 29ರಂದು ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಕಿರುಷಷ್ಟಿ ಉತ್ಸವ ನಡೆಯಿತು.


ಡಿ.28ರಂದು ಬೆಳಿಗ್ಗೆ 10ರಿಂದ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಕಿರುಷಷ್ಟಿ ಉತ್ಸವ ಮತ್ತು ಕಟ್ಟೆಪೂಜೆ ನಡೆಯಿತು.

ಡಿ.29ರಂದು ಬೆಳಿಗ್ಗೆ ಶ್ರೀಸುಬ್ರಹ್ಮಣ್ಯ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here