ಡಿ.31:ಮರೀಲು ಸ್ನೇಹನಗರದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಪುತ್ತೂರು: ಮರೀಲು ಸ್ನೇಹನಗರ ಇಲ್ಲಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಡಿ.31 ರಂದು ಸಂಜೆ ಮರೀಲು ಸ್ನೇಹನಗರದ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಜರಗಲಿರುವುದು.


ಸಂಜೆ ಕಾವು ಮಾಣಿಯಡ್ಕ ಶ್ರೀ ದುರ್ಗಾವಾಹಿನಿ ಮಹಿಳಾ ಭಜನಾ ಮಂಡಳಿ ಇವರಿಂದ ಭಜನೆ, ರಾತ್ರಿ ಕಲಾ ತಪಸ್ವಿ ಸಾಂಸ್ಕೃತಿಕ ತಂಡ ಇವರಿಂದ ಹಾಡು, ನೃತ್ಯ, ಜಾದೂ, ಯಕ್ಷಗಾನ, ಪ್ರಹಸನ, ಶಾಡೋ ಪ್ಲೇ, ಸ್ಯಾಕ್ಸೋಫೋನ್ ಹಾಗೂ ಅಮೋಘ ಮನರಂಜನಾ ಕಾರ್ಯಕ್ರಮ ನಡೆಯಲಿರುವುದು. ನಂತರ ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಮನೋಜಿತ್, ಗೌರವಾಧ್ಯಕ್ಷ ರಾಜೇಂದ್ರ ಕೆ.ಮೆಸ್ಕಾಂ, ಕಾರ್ಯದರ್ಶಿ ಕಾರ್ತಿಕ್ ಸಂಜಯನಗರ, ಕೋಶಾಧಿಕಾರಿ ಹರೀಶ್ ರೈ ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here