ಬಾಯಂಬಾಡಿ: ಶಾಶ್ವತ ತಡೆಗೋಡೆ ಯೋಜನೆ ಗುದ್ದಲಿ ಪೂಜೆ

0

ಪುತ್ತೂರು : ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖ ದೇವಸ್ಥಾನದ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಅನ್ವಯ ರೂ. 50 ಲಕ್ಷ ವೆಚ್ಚದ ಶಾಶ್ವತ ತಡೆಗೋಡೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದ ಪ್ರಧಾನ ಅರ್ಚಕ ಜಯರಾಮ ಬಡೆಕಿಲ್ಲಾಯ ಪ್ರಸಾದ ನೀಡಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೇಮಿರಾಜ ಪಾಂಬಾರು  ಶಾಸಕರಿಗೆ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ ಯವರಿಗೆ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಉತ್ಸವ ಸಮಿತಿ ಅಧ್ಯಕ್ಷರು, ಊರಿನ ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here