ಪಾಣಾಜೆ: ಗ್ರಾ.ಪಂ. ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

0

ಪಾಣಾಜೆ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷ ಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ದ. 27  ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್  ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನವೀನ್ ಕುಮಾರ್ ಪುತ್ತೂರು ವಿಶೇಷ ಚೇತನರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ  ನೀಡಿದರು. 
ಕೆನರಾ ಬ್ಯಾಂಕಿನ  FLC ಅಧಿಕಾರಿ ಗೀತಾ ವಿಜಯ್ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ. ಪಂ. ಉಪಾಧ್ಯಕ್ಷ ಕೆ ಅಬೂಬಕ್ಕರ್, ಸದಸ್ಯರಾದ ಕೃಷ್ಣಪ್ಪ ಪೂಜಾರಿ , ಮೋಹನ್ ನಾಯ್ಕ, ಮೈಮೂನತುಲ್ ಮೆಹ್ರಾ, ಸುಲೋಚನಾ, ವಿಮಲಾ,‌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಮತಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಆಶಾ, ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಅಬ್ದುಲ್ ಅಝೀಝ್,  ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಎಸ್ ಅಬೂಬಕ್ಕರ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮ ವ್ಯಾಪ್ತಿಯ ವಿಶೇಷ ಚೇತನರು ಭಾಗವಹಿಸಿದರು.

LEAVE A REPLY

Please enter your comment!
Please enter your name here