ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗೊನೆ ಮುಹೂರ್ತ

0

ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 14ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಡಿ.30ರಂದು ಗೊನೆ ಮುಹೂರ್ತ ನಡೆಯಿತು.


ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ದೇವಳದ ಪ್ರಧಾನ ಅರ್ಚಕ ಗುರುರಾಜ್ ಮಡಕುಲಾಯ ಅವರು ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು, ಸದಸ್ಯರಾದ ಶಶಿಧರ ಕಿನ್ನಿಮಜಲು, ನೋಣಾಲು ಜೈರಾಜ್ ಭಂಡಾರಿ, ಜಯಶೀಲ ರೈ ಏಳ್ನಾಡುಗುತ್ತು, ಧನರಾಜ್ ಆಲೇಖಿ, ಜಯರಾಮ ರೈ ಅಡ್ಯೆತ್ತಿಮಾರು, ಅರುಣಾ ಸಿ.ರೈ, ಅರುಣಾ ಜಿ.ರೈ ಬಳ್ಳಮಜಲುಗುತ್ತು, ಗೌರವ ಸಲಹೆಗಾರರಾದ ಚಂದ್ರಹಾಸ ರೈ ತುಂಬೇದ ಕೋಡಿ, ವಿಷ್ಣು ಸೇವಾ ಸಮಿತಿ ಗೌರವಾಧ್ಯಕ್ಷ ಶಿವರಾಮ ಆಳ್ವ, ಪ್ರಧಾನ ಕಾರ್ಯದರ್ಶಿ ತಿರುಮಲೇಶ್ವರ ಭಟ್, ಕೋಶಾಧಿಕಾರಿ ಅರವಿಂದ ಭಗವಾನ್‌ದಾಸ್ ರೈ, ವಿಷ್ಣುಮೂರ್ತಿ ಬಡೆಕ್ಕಿಲಾಯ ಸಹಿತ ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here