ಪಂಚಾಯತ್ ರಾಜ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಜಿಲ್ಲಾ ಸಂಘದ ಅಧ್ಯಕ್ಷರಾಗಿ ನಾಗೇಶ್ ಎಂ

0

ಪುತ್ತೂರು: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ೨೦೨೩- ೨೦೨೫ರ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್ಯಾಪು ಗ್ರಾ.ಪಂ ಪಿಡಿಓ, ಪ್ರಸ್ತುತ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾ.ಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಗೇಶ್ ಎಂ ಚುನಾಯಿತರಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ಒಳಮೊಗ್ರು ಪಿಡಿಓ ಅವಿನಾಶ್ ಬಿ.ಆರ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿಡ್ಪಳ್ಳಿಯ ಪಿಡಿಓ ಸಂಧ್ಯಾಲಕ್ಷ್ಮೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಬಂಟ್ವಾಳ ಸಜೀಪಮುನ್ನೂರು ಗ್ರಾ.ಪಂನ ಪಿಡಿಓ ಲಕ್ಷ್ಮಣ ಹೆಚ್ ಕೆ., ಖಜಾಂಚಿಯಾಗಿ ಪ್ರಸ್ತುತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಪ್ತ ಸಹಾಯಕರಾಗಿರುವ ಪರಮೇಶ್ವರ, ರಾಜ್ಯ ಪರಿಷತ್ ಸದಸ್ಯರಾಗಿ ಬೆಳ್ಮ ಗ್ರಾ.ಪಂನ ಪಿಡಿಓ ರಮೇಶ್ ನಾಯ್ಕ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷೆಯಾಗಿ ಕೊಳ್ನಾಡು ಗ್ರಾ.ಪಂನ ಪಿಡಿಓ ರೋಹಿಣಿ, ಸಂಘಟನಾ ಕಾರ್ಯದರ್ಶಿಯಾಗಿ ಬಾಳ್ತಿಲ ಗ್ರಾ.ಪಂ ಪಿಡಿಓ ಸಂಧ್ಯಾ ಅಶೋಕ್, ಕ್ರೀಡಾ ಕಾರ್ಯದರ್ಶಿಯಾಗಿ ಮಂಗಳೂರು ಅಡ್ಯಾರು ಗ್ರಾ.ಪಂ ಪಿಡಿಓ ಕೃಷ್ಣ ನಾಯ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here