ಉಪ್ಪಿನಂಗಡಿ ಮಠ ಪುಳಿತ್ತಡಿ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಪುತ್ತೂರು: ದ.ಕ ಜಿ.ಪಂ.ಹಿ.ಪ್ರಾ. ಶಾಲೆ ಉಪ್ಪಿನಂಗಡಿ ಮಠ ಪುಳಿತ್ತಡಿ ಇದರ ಶಾಲಾ ಪ್ರತಿಬಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಉಪ್ಪಿನಂಗಡಿ ಜೆಸಿಐನ ಅಧ್ಯಕ್ಷರಾದ ಡೀಕಯ್ಯ ಗೌಂಡತ್ತಿಗೆ ಉದ್ಘಾಟಿಸಿ ಶುಭಹಾರೈಸಿದರು. ತಾ.ಪಂ.ಮಾಜಿ ಸದಸ್ಯ ಉಮೇಶ್ ಶೆಣೈ, ಉಪ್ಪಿನಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಜಗದೀಶ ನಾಯಕ್, ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ, ನ್ಯಾಯವಾದಿ ಭಾಸ್ಕರ ಕೋಡಿಂಬಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಆರ್ತಿಲ, ಗ್ರಾ.ಪಂ.ಸದಸ್ಯೆ ಜಯಂತಿ ಕೇಶವ ರಂಗಾಜೆ ಉಪಸ್ಥಿತರಿದ್ದರು.

ಈ ಸಂದರ್ಬದಲ್ಲಿ ಶಾಲೆ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ಕೊಡುಗೆಯಾಗಿ ನೀಡಿದ ರೋಟರಿ ಕ್ಲಬ್‌ನ ಅಧ್ಯಕ್ಷ ಜಗದೀಶ ನಾಯಕ್ ಹಾಗೂ ಶಾಲಾ ಸ್ಮಾರ್ಟ್ ಕ್ಲಾಸ್ ಕೊಠಡಿಗೆ ಪೈಂಟ್‌ನ ಕೊಡುಗೆಯಾಗಿ ನೀಡಿದ ವೆಂಕಟ್ರಮಣ ಗೌಡ ಕಳುವಾಜೆ, ಶಾಲಾ ಮಕ್ಕಳಿಗೆ ಸಹಾಯ ನೀಡುವ ನಿಟ್ಟಿನಲ್ಲಿ ದತ್ತಿ ನಿಧಿ ನೀಡಿದ ಪುಳಿತ್ತಡಿ ಸೇಸಪ್ಪ ಗೌಡ ಮತ್ತು ಕಮಲ ದಂಪತಿಗಳನ್ನು ಗೌರವಿಸಲಾಯಿತು. ಶಾಲಾ ಮುಖ್ಯಗುರು ಜೂಲಿಯಾನ ವಾಸ್ ಸ್ವಾಗತಿಸಿ, ಪ್ರಾಸ್ತಾವನೆಗೈದರು. ಶಿPಕಿಯರಾದ ಪ್ರನಂತೇಶ್ವರಿ, ಶುಭಲತಾ, ಅತಿಥಿ ಶಿಕ್ಷಕಿ ಸುನಚಿದಾರವರು ಸಹಕರಿಸಿದರು. ಬಳಿಕ ಶಾಲಾ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here