ಬೆಂಗಳೂರು: ಹಳೇಯ ಪಿಂಚಣಿ ವ್ಯವಸ್ಥೆ (ಯುಪಿಎಸ್) ಜಾರಿಗೆ ಒತ್ತಾಯಿಸಿ ಸರಕಾರಿ ನೌಕರರು ನಡೆಸುತ್ತಿರುವ ಧರಣಿ ಇಂದಿಗೆ 15ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಯಲ್ಲಿ ನಿರತರಾದ ಸರಕಾರಿ ನೌಕರರ ಮನವೊಲಿಕೆಗೆ ಪ್ರಯತ್ನಿಸಿದ್ದರು. ಇನ್ನೊಂದೆಡೆ ಪ್ರತಿಭಟನಾ ನಿರತರನ್ನು ಬೆಂಬಲಿಸಿದ ಜನಾರ್ಧನ ರೆಡ್ಡಿ ಈ ರಾಜ್ಯದ ಜನರಿಗೆ, ನೌಕರರಿಗೆ ಒಳ್ಳೆಯದನ್ನು ಮಾಡಬೇಕು ಎಂದು ಪಣತೊಟ್ಟಿದ್ದೇನೆ. ನಿಮ್ಮ ಹೋರಾಟದಲ್ಲಿ ಜೊತೆಗಿರುತ್ತೇನೆ ಎಂದು ಹೇಳಿದ್ದಾರೆ.