ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿ ಆಲಿಸ್ ಆಪೋಸ್ ನಿವೃತ್ತಿ-ಬೀಳ್ಕೊಡುಗೆ

0

ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾ ಅಧಿಕಾರಿ ಆಲಿಸ್ ಆಪೋಸ್‌ರವರು ದ. 31 ರಂದು ಸೇವಾ ನಿವೃತ್ತಿ ಹೊಂದಿದ್ದು, ಇವರಿಗೆ ಬೀಳ್ಕೊಡುಗೆ ಸಮಾರಂಭ ಸರ್ವೆ ಪ್ರಾ.ಆ.ಕೇಂದ್ರದಲ್ಲಿ ಜರಗಿತು.


ಆಲಿಸ್ ಆಪೋಸ್‌ರವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಅಧ್ಯಕ್ಷತೆಯನ್ನು ತಾಲೂಕು ಅರೋಗ್ಯಾಧಿಕಾರಿ ಡಾ.ದೀಪಕ್ ರೈ ವಹಿಸಿದ್ದರು. ಈಶ್ವರಮಂಗಲ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್, ನರಿಮೊಗರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಉಪಾಧ್ಯಕ್ಷ ಸುಧಾಕರ್ ಕುಲಾಲ್ ಉಪಸ್ಥಿತರಿದ್ದರು.

ಸರ್ವೆ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ ನಾಯಕ್ ಸ್ವಾಗತಿಸಿ, ಆರೋಗ್ಯ ಸುರಕ್ಷಾಧಿಕಾರಿ ಪವಿತ್ರಾ ಕಾರ್‍ಯಕ್ರಮ ನಿರೂಪಿಸಿ, ವಂದಿಸಿದರು.
ಸಮಾರಂಭದಲ್ಲಿ ಆಲಿಸ್ ಆಪೋಸ್‌ರವರ ಕುಟುಂಬ ವರ್ಗದವರು ಹಾಗೂ ಸರ್ವೆ ಪ್ರಾ.ಆ.ಕೇಂದ್ರದ ಸಿಬ್ಬಂಧಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here