ಪಾಣಾಜೆ ಬಿಬಿ ಕ್ರಿಯೇಷನ್ ಸಾದರಪಡಿಸುವ ಪಾವಂಜೆ ಮೇಳದ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರ ಬಿಡುಗಡೆ

0

ಪಾಣಾಜೆ: ಬಿಬಿ ಕ್ರಿಯೇಷನ್ ಸಾದರಪಡಿಸುವ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಜ. 11 ರಂದು ಪಾಣಾಜೆ ಸುಬೋಧ ಪ್ರೌಢಶಾಲೆಯ ಆವರಣದಲ್ಲಿ ನಡೆಯಲಿರುವ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು.


ಪಾಣಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸುಬೋಧ ಪ್ರೌಢಶಾಲೆಯ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರ ಎ.ಬಿ., ಬಿಬಿ ಕ್ರಿಯೇಷನ್ಸ್ ನ ಹರೀಶ್ ಕಡಮಾಜೆ, ಪ್ರದೀಪ್ ಪಾಣಾಜೆ ಹಾಗೂ ಸುಬೋಧ ಪ್ರೌಢಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಅಧ್ಯಾಪಕ ವೃಂದ ಈ ಸಂದರ್ಭದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here