ಕುಂಬ್ರ: ಕಾರು ಅಪಘಾತ- ಮೂವರಿಗೆ ಗಾಯ

0

ಪುತ್ತೂರು: ಕುಂಬ್ರ ಸಾರೆಪುಣಿ ಮೆಸ್ಕಾಂ ಸಮೀಪ ಮಾರುತಿ ಕಾರು ರಸ್ತೆ ಬದಿಯಲ್ಲಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿರುವ ಘಟನೆ ಜ.2ರಂದು ರಾತ್ರಿ ನಡೆದಿದೆ. ಘಟನೆಯಿಂದಾಗಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಗಾಯಾಳು ಮಹಿಳೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿರುವುದಾಗಿ ಹಾಗೂ ಇನ್ನಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿರುವುದಾಗಿ ತಿಳಿದು ಬಂದಿದೆ.

ಇಲ್ಲಿ ಅನೇಕ ಸಮಯಗಳಿಂದ ರಸ್ತೆ ಬದಿಯಲ್ಲಿ ವಿದ್ಯುತ್ ಕಂಬ ರಾಶಿ ಹಾಕಲಾಗಿದ್ದು ಇದರಿಂದಾಗಿ ಅನೇಕ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ವಾಹನಗಳು ಸೈಡ್ ಕೊಡುವ ವೇಳೆ ಇದು ಅಪಘಾತಕ್ಕೆ ಕಾರಣವಾಗುತ್ತಿರುವುದರಿಂದ ಕಂಬಗಳನ್ನು ಕೂಡಲೇ ಸ್ಥಳದಿಂದ ತೆರವುಗೊಳಿಸುವಂತೆ ಆಗ್ರಹ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here