ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು

0

ನೆಲ್ಯಾಡಿ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ದಿ.ವೆಂಕಪ್ಪಗೌಡ ಅವರ ಪತ್ನಿ ಚೆನ್ನಮ್ಮ (70ವ) ಎಂಬವರು ಮೃತ ಮಹಿಳೆ. ಚೆನ್ನಮ್ಮ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ.

ಮೃತರು ಪುತ್ರರಾದ ಜನಾರ್ದನ, ಶೇಖರ ಮತ್ತು ಪುತ್ರಿಯರಾದ ಗೀತಾ, ವಿಜಯ, ಪುಷ್ಪಾ ಎಂಬವರನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here