ಜ. 8: ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ

0

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ, ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗಾಗಿ 8ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಜ. 8ರಂದು ಬೆಳಿಗ್ಗೆ 10.15ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಲಿದೆ.


ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪುರೋಹಿತ್ ಕೆ. ರಮೇಶ ಆಚಾರ್ಯ ಗೇರುಕಟ್ಟೆ ಅವರ ಆಚಾರ್ಯತ್ವದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ನಡೆಯಲಿದೆ. ಪ್ರತಿ 4 ವರ್ಷಗಳಿಗೊಮ್ಮೆ ನಡೆಯುವ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಈ ಸಲ 8ನೇ ಬಾರಿ ನಡೆಯಲಿದೆ.

ಬೆಳಿಗ್ಗೆ 11.15ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಹಾಸನ ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳವರು ಆಶೀರ್ವಚನ ನೀಡಲಿದ್ದಾರೆ. ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ ಆಚಾರ್ಯ ಕೆ. ಅಧ್ಯಕ್ಷತೆ ವಹಿಸುವರು.

ಬಂಟ್ವಾಳ ವಿಶ್ವಕರ್ಮ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು, ನಿವೃತ್ತ ಉಪಖಜಾನಾಧಿಕಾರಿ ಬಿ. ವಿಠಲಾಚಾರಿ ಮುಖ್ಯ ಅತಿಥಿಯಾಗಿರುವರು. ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಜಗದೀಶ ಆಚಾರ್ಯ ಎಸ್.ಎನ್., ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಶುಭಾ ಪುರುಷೋತ್ತಮ ಆಚಾರ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here