ಸಾರಡ್ಕ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ವಿಟ್ಲ: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಸಾರಡ್ಕದಲ್ಲಿ ನಡೆದಿದೆ. ಬೆಳ್ತಗಂಡಿ ತಾಲೂಕು ಮಚ್ಚಿನ ನಿವಾಸಿ ಕೇಶವ ನಾಯ್ಕ (56 ವ.) ಮೃತ ದುರ್ದೈವಿಯಾಗಿದ್ದಾರೆ.

ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವ ಅವರು ಹಲಸಿನ ಮರ ಏರಿ ಕಾಳು ಮೆಣಸು ತೆಗೆಯುವ ಸಮಯ ಆಕಸ್ಮಿಕವಾಗಿ ಕೈ, ಕಾಲು ಜಾರಿ ಕೆಳಗೆ ನೆಲಕ್ಕೆ ಬಿದ್ದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ವೈದ್ಯರು ಪರಿಶೀಲನೆ ನಡೆಸಿದಾಗ ಕೇಶವರವರು ಮೃತರಾಗಿರುವ ಬಗ್ಗೆ ತಿಳಿಸಿದ್ದರು. ಈ ಬಗ್ಗೆ ಸಹೋದರ ಜಗದೀಶರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here