ಇಂದಿನಿಂದ 3 ದಿನಗಳ ಕನ್ನಡ ನುಡಿ ಜಾತ್ರೆಗೆ ಚಾಲನೆ

0

ಹಾವೇರಿ: ಕನ್ನಡ ಸಾಹಿತ್ಯದ ನುಡಿ ಜಾತ್ರೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಏಲಕ್ಕಿ ಪಟ್ಟಣ ಹಾವೇರಿ ನಗರದ ಕನಕ, ಶರೀಫ ಮತ್ತು ಸರ್ವಜ್ಞ ವೇದಿಕೆಯ ಮುಂಭಾಗ ರಾಷ್ಟ್ರ, ನಾಡ ಮತ್ತು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು.

ಕಾರ್ಮಿಕ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಲಿಂಗಯ್ಯ ಬಿ ಹಿರೇಮಠ್ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಸಮ್ಮೇಳನದ ಅಧ್ಯಕ್ಷ ಪದ್ಮಶ್ರೀ ದೊಡ್ಡೇರಂಗೇ ಗೌಡ ಅವರನ್ನು ಭವ್ಯ ಮೆರವಣಿಗೆಯ ಮೂಲಕ ವೇದಿಕೆಗೆ ಬರಮಾಡಿಕೊಳ್ಳಲಾಯ್ತು. ಸಾಹಿತ್ಯ ಸಮ್ಮೇಳನ ಇಂದಿನಿಂದ 3 ದಿನಗಳ ಕಾಲ ನಡೆಯಲಿದೆ.

LEAVE A REPLY

Please enter your comment!
Please enter your name here