ಪಾಂಗಳಾಯಿ ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

0

ಪುತ್ತೂರು:ಕಾರಣಿಕ ಕ್ಷೇತ್ರವಾಗಿರುವ ಪರ್ಲಡ್ಕ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಶ್ರೀ ಮುಡ್ಯಂತ್ತಾಯ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವವು ಪೂರ್ವ ಶಿಷ್ಟ ಸಂಪ್ರದಾಯದಂತೆ ಜ.೭ರಂದು ನಡೆಯಿತು.
ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಬೆಳಗ್ಗೆ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಶ್ರೀ ಮಹಾಗಣಪತಿ ಹೋಮ, ನಾಗತಂಬಿಲ, ಸಾರ್ವಜನಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ದೈವಗಳ ಸನ್ನಿಧಿಯಲ್ಲಿ ಕಲಶ ತಂಬಿಲ ಸೇವೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.


sಸಂಜೆ ಶ್ರೀ ದೈವಗಳ ಭಂಡಾರ ತೆಗೆದು ಶ್ರೀ ಅರಸು ಮುಂಡ್ಯತ್ತಾಯ ಮತ್ತು ಪರಿವಾರ ದೈವಗಳಾದ ಪೊಟ್ಟಭೂತ, ಪಂಜುರ್ಲಿ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಿತು. ನೇಮೋತ್ಸವದಲ್ಲಿ ಊಟ, ಉಪಾಹಾರ, ವಾಹನ ನಿಲುಗಡೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಬಹಳಷ್ಟು ಅಚ್ಚುಕಟ್ಟಿನಲ್ಲಿ ನಡೆದಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.

೫೦೦೦ ಮಂದಿಗೆ ಅನ್ನದಾನ:
ವರ್ಷಾವಧಿ ನೇಮೋತ್ಸವದಲ್ಲಿ ಬೆಳಿಗ್ಗೆ ಹಾಗೂ ಸಂಜೆ ಉಪಹಾರಾವನ್ನು ಒದಗಿಸಿಲಾಗಿತ್ತು. ಸುಮಾರು ೫೦೦೦ ಅಧಿಕ ಮಂದಿ ಭಕ್ತಾದಿಗಳು ಅನ್ನಪ್ರಸಾದವನ್ನು ಸ್ವೀಕರಿಸಿದರು.


ಚಿನ್ನದ ಕಡಗ ಸಮರ್ಪಣೆ:
ಶ್ರೀ ಅರಸು ಮುಂಡ್ಯತ್ತಾಯ ದೈವದ ನರ್ತಕ ಕಾಂಚನ ಸುಬ್ಬ ನಲಿಕೆಯವರಿಗೆ ದೈವಸ್ಥಾನದ ವತಿಯಿಂದ ನೂತನ ಚಿನ್ನದ ಕಡಗವನ್ನು ನೇಮೋತ್ಸವದಲ್ಲಿ ಸಮರ್ಪಿಸಿ ಗೌರವಿಸಿದರು.


ವಿವಿಧ ರಾಜಕೀಯ, ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು, ದೈವಸ್ಥಾನದ ಆಡಳಿತ ಸಮಿತಿ, ನೇಮೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಊರ, ಪರವೂರ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿ ನೇಮೋತ್ಸವದ ವೈಭವವನ್ನು ಕಣ್ತುಂಬಿಕೊಂಡು ಪುಣೀತರಾದರು.

 

LEAVE A REPLY

Please enter your comment!
Please enter your name here