ವಿಜಯ- ವಿಕ್ರಮ ಕಂಬಳದ ಕರೆ ಮುಹೂರ್ತ

0

ಉಪ್ಪಿನಂಗಡಿ: 37 ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳಕ್ಕೆ ಇಲ್ಲಿನ ಹಳೆಗೇಟು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿರುವ ಕಂಬಳ ಕರೆಯಲ್ಲಿ ಜ.7 ರಂದು ಕರೆ ಮುಹೂರ್ತ ನಡೆಯಿತು.


ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಹರೀಶ್ ಉಪಾಧ್ಯಾಯ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಬಾರಿಯ ಕಂಬಳ ಮಾರ್ಚ್ 11 ಮತ್ತು 12 ರಂದು ನಡೆಯಲಿದ್ದು, ಕರೆ ಮುಹೂರ್ತದ ಬಳಿಕ ಕರೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ.

ಈ ಸಂದರ್ಭ ಕಂಬಳ ಸಮಿತಿ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಕಾರ್ಯದರ್ಶಿ ಕೇಶವ ಭಂಡಾರಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಂಬಳ ಸಮಿತಿ ಪದಾಧಿಕಾರಿಗಳಾದ ರಾಮಚಂದ್ರ ಮಣಿಯಾಣಿ, ನಿರಂಜನ್ ರೈ ಮಠಂತಬೆಟ್ಟು, ವಿಶ್ವನಾಥ ಶೆಟ್ಟಿ ಕಂಗ್ವೆ, ಶಿವರಾಮ ಶೆಟ್ಟಿ ಗೋಳ್ತಮಜಲು, ಕೃಷ್ಣಪ್ರಸಾದ್ ಬೊಳ್ಳಾವು, ವಿದ್ಯಾಧರ ಜೈನ್, ಜಯಪ್ರಕಾಶ್ ಬದಿನಾರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here