ಪುತ್ತೂರ ಮುತ್ತು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಆಟೋ ರಿಕ್ಷಾ ಪಾರ್ಕ್ ಗೆ ಶೀಟ್ ಹೊದಿಕೆ -ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆಟೋ ರಿಕ್ಷಾ ಪಾರ್ಕ್ ನಲ್ಲಿ ಕಾಮಗಾರಿಗೆ ಮುಹೂರ್ತ

0

ಪುತ್ತೂರು: ಪುತ್ತೂರ ಮುತ್ತು ಲಯನ್ಸ್ ಕ್ಲಬ್ ವತಿಯಿಂದ ಕಡಮಜಲು ಸುಭಾಶ್ ರೈ ಅವರ ನೇತೃತ್ವದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸ್ನೇಹ ಸಂಗಮ ಆಟೋ ರಿಕ್ಷಾ ಪಾರ್ಕ್ ಗೆ ಶೀಟ್ ಹೊದಿಕೆ ಕಾಮಗಾರಿಗೆ ಜ.9 ರಂದು ಮುಹೂರ್ತ ನೆರವೇರಿಸಲಾಯಿತು.


ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ತೆಂಗಿನ ಕಾಯಿ ಒಡೆದು ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮುತ್ತು ಲಯನ್ಸ್ ಕ್ಲಬ್ ತುಳುನಾಡ ವೈಭವದ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್, ವಲಯ ಅಧ್ಯಕ್ಷ ರಮೇಶ್ ರೈ, ಕಾಮಗಾರಿಯ ಗುತ್ತಿಗೆದಾರ ಶಾರದಾಂಬ ಇಂಜಿನಿಯರಿಂಗ್ ವರ್ಕ್ಸ್ ನ ಮಾಲಕ ಶಿವಾನಂದ, ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕರ, ಮಾಲಕರ ಸಂಘದ ಗೌರವಾಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಅಧ್ಯಕ್ಷರು ಮತ್ತು ಸದಸ್ಯರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here