ಪುತ್ತೂರು: ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರಕಾರ ಹಾಗೂ National Council of Educational Research and Training (NCERT) ನವದೆಹಲಿಯವರು 9 ರಿಂದ 12ನೇ ತರಗತಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕಾಗಿ ಒಡಿಶಾದ ಭುವನೇಶ್ವರದ Regional Institute of Education ಇಲ್ಲಿ ನಡೆಸಿದ ರಾಷ್ಟ್ರಮಟ್ಟದ “ಕಲೋತ್ಸವ-2022″ರಲ್ಲಿ ತೇಜ ಚಿನ್ಮಯ ಹೊಳ್ಳ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರನ್ನು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ರಾಜ್ಯ ಸಚಿವರುಗಳಾದ ಡಾ. ಸುಭಾಷ್ ಸರ್ಕಾರ್ ಮತ್ತು ಅನ್ನಪೂರ್ಣಾ ದೇವಿ ಹಾಗೂ ಶಿಕ್ಷಣ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಡಾ. ರಾಜಕುಮಾರ್ ರಂಜನ್ ಸಿಂಘ್ ರವರುಗಳು ಪುರಸ್ಕಾರ ನೀಡಿ ಗೌರವಿಸಿರುತ್ತಾರೆ. ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿರುವ ಇವರು ಪುತ್ತೂರು ಕೊಂಬೆಟ್ಟು ನಿವಾಸಿ ಹರೀಶ್ ಹೊಳ್ಳ ಮತ್ತು ಸಂಗೀತ ವಿದುಷಿ ಡಾ. ಸುಚಿತ್ರಾ ಹೊಳ್ಳ ದಂಪತಿಯ ಸುಪುತ್ರ ಹಾಗೂ ವಿದ್ವಾನ್ ಟಿ.ಜಿ. ಗೋಪಾಲಕೃಷ್ಣನ್ ರವರ ಶಿಷ್ಯ.