ಕುಂಜಾರು ಮದಗ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ

0

ಪುತ್ತೂರು: ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಜ.9ರಂದು ದರ್ಶನ ಬಲಿ ಬಟ್ಟಲು ಕಾಣಿಕೆ ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಜ.8ರಂದು ಸಂಜೆ ಭಜನೆ, ಚೆಂಡೆ ಸೇವೆ, ಮಹಾಪೂಜೆ, ದೇವರ ಬಲಿ ಹೊರಟು ಉತ್ಸವ ಹಾಗೂ ಕಟ್ಟೆಪೂಜೆ ನಡೆಯಿತು. ಜ.9ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ನವಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ ಚೆಂಡೆ ಸೇವೆ, ಶ್ರೀ ದೇವರ ಬಲಿ ಹೊರಟು ಉತ್ಸವ ಕಟ್ಟೆಪೂಜೆ, ಶ್ರೀ ಮನ್ಮಹಾರಥೋತ್ಸವ ನಡೆದ ಬಳಿಕ ಕ್ಷೇತ್ರದ ದೈವಗಳ ಭಂಡಾರ ತೆಗೆದು ಹುಲಿಭೂತ, ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು:

ಜಾತ್ರೋತ್ಸವ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜ.8ರಂದು ಸಂಜೆ ಸ್ಥಳೀಯ ಗ್ರಾಮಸ್ಥರಿಂದ ವಿವಿಧ ವಿನೋದಾವಳಿಗಳು ನಡೆಯಿತು. ಜ.9ರಂದು ರಾತ್ರಿ ಪುತ್ತೂರು ಕಲಾವಿದರು ಅರ್ಪಿಸುವ ‘ರಡ್ಡೆಟ್ ಒಂಜಿ’ ಎಂಬ ಸಾಂಸಾರಿಕ ನಾಟಕ ನಡೆಯಲಿದೆ.

ಶಾಸಕ ಸಂಜೀವ ಮಠಂದೂರು, ಜಿಲ್ಲಾ ದಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್, ಸದಸ್ಯರಾದ ಬಾಲಕೃಷ್ಣ ಜೋಯಿಷ, ಚೈತ್ರನಾರಾಯಣ ಸೇಡಿಯಾಪು, ಯಶೋಧರ ಕುಂಜಾರು, ಮಧುಸೂದನ ಪಡ್ಡಾಯೂರು, ಲೋಕೇಶ್ ಮುಂಡಾಜೆ, ಜಯಂತಿ ಪಳ್ಳ, ಪುಷ್ಪಾ ದೇಂತಡ್ಕ ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಜಾತ್ರೋತ್ಸವದಲ್ಲಿ ಪಾಲ್ಗೊಂಡು ಪುಣೀತರಾದರು.

LEAVE A REPLY

Please enter your comment!
Please enter your name here