ಕಾಣಿಯೂರು ಏಲಡ್ಕದಲ್ಲಿ 15ನೇ ಪ್ರತಿಷ್ಠಾ ವಾರ್ಷಿಕೋತ್ಸವ

0

ಕಾಣಿಯೂರು: ಕಾಣಿಯೂರು ಗ್ರಾಮದ ಏಲಡ್ಕ ಎಂಬಲ್ಲಿರುವ ಶ್ರೀ ಶಿರಾಡಿ ರಾಜನ್ ದೈವ ಮತ್ತು ಚಾಮುಂಡಿ ದೈವ ಹಾಗೂ ಶ್ರೀ ಪರಿವಾರ ದೈವಗಳ 15ನೇ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 48 ಕಾಯಿಯ ಶ್ರೀ ಗಣಪತಿ ಹೋಮವು ಜ 9ರಂದು ನಡೆಯಿತು. ಬೆಳಿಗ್ಗೆ ಸ್ವಸ್ತಿ ಪುಣ್ಯಾಹ ವಾಚನ, ದೈವತಾ ಪ್ರಾರ್ಥನೆ, ಕಲಶಾಭಿಷೇಕ, 48 ಕಾಯಿಯ ಗಣಪತಿ ಹೋಮ, ಪೂರ್ಣಾಹುತಿ, ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರಾದ ರೋಹಿತ್ ಅನಿಲ, ವಸಂತ ಗೌಡ ಕಂಪ, ಶೀನಪ್ಪ ಗೌಡ ಪೆರ್ಲೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ಲಕ್ಷ್ಮಣ ಗೌಡ ಮುಗರಂಜ, ಕಾರ್ಯಕಾರಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ಎಳುವೆ, ಕಾರ್ಯದರ್ಶಿ ಎಂ.ಪಿ. ಪರಮೇಶ್ವರ ಗೌಡ ಮುಗರಂಜ, ಕೋಶಾಧಿಕಾರಿ ರವೀಂದ್ರ ಅನಿಲ ಹಾಗೂ ಗ್ರಾಮಸ್ಥರು, ಕೂಡುಕಟ್ಟಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here