ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

0

ಬೆಟ್ಟಂಪಾಡಿ: ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2022 ನೇ ಸಾಲಿನ ಕಾಲೇಜಿನ ವಿಧ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಜ. 9 ರಂದು ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ರವರು ಉದ್ಘಾಟಿಸಿ `ವಿಧ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗು ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು’ ಸಲಹೆ ನೀಡಿದರು.

ಮುಖ್ಯ ಅತಿಥಿ ಪುತ್ತೂರು ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀಧರ ಗೌಡ ರವರು, `ವಿದ್ಯಾರ್ಥಿಗಳು ಸಮಾಜದ ಆಸ್ತಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಹೆತ್ತವರಿಗೆ ಮತ್ತು ಶಿಕ್ಷಕರಿಗೆ ಹಾಗು ಕಾಲೇಜಿಗೆ ಕೀರ್ತಿ ತರಬೇಕು’ ಎಂದು ಕರೆ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮಾರಣ್ಣ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಂಗನಾಥ ರೈ ಗುತ್ತು ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷೀಯ ಭಾಷಣ ನೆರವೇರಿಸಿದರು.

ಸಹಾಯಕ ಪ್ರಾಧ್ಯಾಪಕ ಅನಂತ ಭಟ್  ಪ್ರಾರ್ಥಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ರಕ್ಷಿತ್ ರೈ ಅಂತಿಮ ಬಿ.ಕಾಂ. ವಂದಿಸಿದರು. ಹಾಗು ಸಾರ್ಥಕ್ ಟಿ. ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಚಾಲಕ ಡಾ. ಕಾಂತೇಶ್, ಸಾಂಸ್ಕೃತಿಕ ಸಂಘದ ಸಂಚಾಲಕ ಡಾ. ಮುರಳಿ ಕೆ., ಕ್ರೀಡಾ ಸಂಘದ ಸಂಚಾಲಕ ಡಾ. ಪೊಡಿಯ ಹಾಗು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಬೋಧಕರು ಮತ್ತು ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು  ಭಾಗವಹಿಸಿದರು.

ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷೆ ಸಿಂಚನ ಅಂತಿಮ ಬಿಬಿಎ, ಕಾರ್ಯದರ್ಶಿ ಹರೀಶ್ ಚಂದ್ರ ಅಂತಿಮ ಬಿಎ., ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಸಾರ್ಥಕ್ ಟಿ. ಅಂತಿಮ ಬಿಕಾಂ., ಜತೆ ಕಾರ್ಯದರ್ಶಿ ದಿವ್ಯ ಎಂ. ಅಂತಿಮ ಬಿಎಸ್ಸಿ, ಕ್ರೀಡಾ ಕಾರ್ಯದರ್ಶಿ ದೀಕ್ಷಿತ್ ರೈ ಅಂತಿಮ ಬಿಎ. ಹಾಗೂ ಜತೆ ಕಾರ್ಯದರ್ಶಿ ದಿಶಾ ರೈ ದ್ವಿತೀಯ ಸಹಕರಿಸಿದರು.

LEAVE A REPLY

Please enter your comment!
Please enter your name here