ಮಂಗಳೂರಿನಲ್ಲಿ ಪೌರ ಕಾರ್ಮಿಕರ ರ್‍ಯಾಲಿ ಪುತ್ತೂರು ನಗರಸಭೆ ಪೌರ ಕಾರ್ಮಿಕರು ಭಾಗಿ

0

ಪುತ್ತೂರು:ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ನೇತೃತ್ವದಲ್ಲಿ ಪೌರಕಾರ್ಮಿಕರು ಮುಷ್ಕರ ನಡೆಸಿ ಕೂಳೂರು ಗೋಲ್ಡ್ ಪಿಂಚ್ ಮೈದಾನದ ಮುಂದೆ ಪ್ರತಿಭಟಿಸಿದ್ದಾರೆ.

ಅಪರಾಹ್ನ ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದಿಂದ ಮಂಗಳೂರು ಮಿನಿ ವಿಧಾನ ಸೌಧದವರೆಗೆ ರ್‍ಯಾಲಿ ನಡೆಸಿದರು.ಪುತ್ತೂರು ನಗರಸಭೆ ಪೌರ ಕಾರ್ಮಿಕರೂ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಗಣ್ಣ ಗೌಡ, ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ಕೆ.ನಾರಾಯಣ ಶೆಟ್ಟಿ, ಕರ್ನಾಟಕ ಹೊರಗುತ್ತಿಗೆ ನೌಕರರ ಸಂಘದ ಮುಖಂಡರಾದ ಎಂ.ಚಂದ್ರು, ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕರಾಗಿರುವ ಪುತ್ತೂರು ನಗರಸಭೆ ಪೌರ ಕಾರ್ಮಿಕರ ಗೌರವಾಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು, ಮಂಗಳೂರು ಸಪಾಯಿ ಕರ್ಮಚಾರಿಗಳ ಸಂಘದ ಮುಖಂಡರಾದ ಅಶೋಕ್ ಕೊಂಚಾಡಿ, ದಿನೇಶ್ ಕುಲಾಲ್, ಚೆನ್ನಕೇಶವ, ಸುಧೀರ್, ಸಿದ್ದರೂಡ, ಪೂವಪ್ಪ ರ್‍ಯಾಲಿಯ ನೇತೃತ್ವ ವಹಿಸಿದ್ದರು.

LEAVE A REPLY

Please enter your comment!
Please enter your name here