ಕರಾಯ: ಗರಡಿ ವಾರ್ಷಿಕ ಜಾತ್ರೆ, ಸನ್ಮಾನ ಕಾರ್ಯಕ್ರಮ

0

ಉಪ್ಪಿನಂಗಡಿ: ಕರಾಯ ಗ್ರಾಮದ ಮರಿಪ್ಪಾದೆ ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.


13  ವರ್ಷಗಳಿಂದ ಕೋಟಿ ಚೆನ್ನಯ್ಯರ ಮುಕ್ಕಾಲ್ದಿಗಳಾಗಿ ಸೇವೆ ಸಲ್ಲಿಸಿದ ಅವಳಿ ಸಹೋದರರಾದ ಬಂಟ್ವಾಳದ ಕೋಟಿ ಮತ್ತು ಚೆನ್ನಯ್ಯರನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಕ್ಷೇತ್ರದ ಪರವಾಗಿ ಸನ್ಮಾನಿಸಿದರು.

ಸರಕಾರದ ಮಟ್ಟದಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ತಣ್ಣೀರುಪಂಥ ಗ್ರಾ.ಪಂ. ಅನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕಬಡ್ಡಿ ಆಟಗಾರರನ್ನು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್‌ನ ಅಧ್ಯಕ್ಷ ರಕ್ಷಿತ್ ಶಿವರಾಂ ಸನ್ಮಾನಿಸಿದರು.

ಈ ಸಂದರ್ಭ ಕ್ಷೇತ್ರದ ಆಡಳಿತ ಮೋಕೇಸ್ತರ ನಿರಂಜನ್ ಜೈನ್ ಭಾವಂತಬೆಟ್ಟು, ಅಭಿವೃದ್ದಿ ಸಮಿತಿ ಅಧ್ಯಕ್ಷ ಅಜಿತ್‌ಕುಮಾರ್ ಹಲೇಜಿ, ತಣ್ಣೀರುಪಂಥ ಗ್ರಾ.ಪಂ. ಉಪಾಧ್ಯಕ್ಷ ಆಯೂಬ್ ಡಿ.ಕೆ., ಮಾಜಿ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಇಳಂತಿಲ ಗ್ರಾ.ಪಂ. ಮಾಜಿ ಅಧ್ಯಕ್ಷ ಮನೋಹರ್ ಕುಮಾರ್, ಕೋಟಿಚೆನ್ನಯ್ಯ ಫ್ರೆಂಡ್ಸ್‌ಕ್ಲಬ್‌ನ ಅಧ್ಯಕ್ಷ ದುರ್ಗಾ ಪ್ರಸಾದ್ ಮತ್ತು ಗ್ರಾ.ಪಂ. ಸದಸ್ಯ ನವೀನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here