ಈಶ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಈಶ ಎಜ್ಯುಕೇಷನಲ್ ಸೋಷಿಯಲ್ ಸರ್ವಿಸ್ ಟ್ರಸ್ಟ್ ನೆಲ್ಲಿಕಟ್ಟೆ ಪುತ್ತೂರು ಇದರ ಆಡಳಿತದಲ್ಲಿ ನಡೆಸಲ್ಪಡುವ ಈಶ ವಿದ್ಯಾಲಯದಲ್ಲಿ 22ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜ. 7ರಂದು ನಡೆಯಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ಶ್ರೀಕಾಂತ್ ಪೂಜಾರಿ ಬಿರಾವು ಮೇಲ್ವಿಚಾರಕರು, ಯುವ ಸಬಲೀಕರಣ ಕ್ರೀಡಾ ಇಲಾಖೆ ಪುತ್ತೂರು ಇವರು ನೆರವೇರಿಸಿ ಇಂದಿನ ದಿನಗಳಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯೂ ಅತ್ಯಗತ್ಯ ಎಂದರು.

ದೈಹಿಕ ಶಿಕ್ಷಕ ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಕ್ರೀಡಾಕೂಟದ ನಿರ್ಣಾಯಕ ಕಾರ್ತಿಕ್ ಮತ್ತು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಶ್ರಫ್ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲ ಎಂ.ಗೋಪಾಲಕೃಷ್ಣ ಪಾಟಾಳಿರವರು ಅಧ್ಯಕ್ಷತೆ ವಹಿಸಿದ್ದರು.ಈಶ ವಿದ್ಯಾಲಯದ ಉಪನ್ಯಾಸಕಿಯರು, ವಿದ್ಯಾರ್ಥಿ_ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿನಿಯರಾದ ಪೂರ್ಣಿಮಾ,ಕಾವ್ಯ,ಕಾವ್ಯಶ್ರೀ ಪ್ರಾರ್ಥನೆಗೈದರು.ಉಪನ್ಯಾಸಕಿಯರಾದ ಸ್ವಾತಿ ಸ್ವಾಗತಿಸಿದರು. ವಿನಯ ವಂದಿಸಿದರು. ನಿಧಿ ಆರ್.ಕೆ. ಕಾರ್‍ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here