ರಾಷ್ಟ್ರೀಯ ಯುವಜನೋತ್ಸವಕ್ಕೆ ಬೆಟ್ಟಂಪಾಡಿ ಕಾಲೇಜಿನ ಕಿರಣ್ ಆಯ್ಕೆ

0

ಪುತ್ತೂರು: ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಭಾರತ ಸರ್ಕಾರ ಅಯೋಜಿಸುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಇದರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಿರಣ್ ಕೆ. ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನು ಪ್ರತಿನಿಧಿಸಲಿದ್ದಾರೆ. 26ನೇ ರಾಷ್ಟ್ರೀಯ ಯುವಜನೋತ್ಸವವು ಈ ಬಾರೀ ಕರ್ನಾಟಕದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ದೇಶದ ಎಲ್ಲಾ ರಾಜ್ಯಗಳ ಯುವಜನರು ಭಾಗವಹಿಸಲಿದ್ದಾರೆ ಎಂದು ನೆಹರು ಯುವಕೇಂದ್ರ ದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಪರ್ ಪೇಟೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here