ತೆಂಕಿಲ ವಿವೇಕಾನಂದ ಆ.ಮಾ ಶಾಲಾ ವಿದ್ಯಾರ್ಥಿಗಳು 30ನೇ ವಿಜ್ಞಾನ ಸಮಾವೇಶದಲ್ಲಿ ಪ್ರಥಮ, ದ್ವಿತೀಯ ಸ್ಥಾನದೊಂದಿಗೆ ಸತತ 14 ನೇ ಬಾರಿಗೆ ರಾಜ್ಯ ಮಟ್ಟಕ್ಕೆ

0

ಪುತ್ತೂರು: 30ನೇ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ ((National Children’s Science Congress) ಸ್ಪರ್ಧೆಯು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದ.ಕ ಜಿಲ್ಲೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ ಇವುಗಳ ಸಹಯೋಗದೊಂದಿಗೆ ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯಲ್ಲಿ ಜ.9 ರಂದು ನಡೆಯಿತು.

ಸೀನಿಯರ್ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 9 ನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ ಎಸ್.ಪಿ  (  ಸುಂದರ ಪೂಜಾರಿ ಹಾಗೂ  ಭವಿತಾ ಪಿ ದಂಪತಿಗಳ ಪುತ್ರಿ) ಹಾಗೂ ಪ್ರತೀಕ್ಷಾ ಆಳ್ವಾ,( ಎ ಸಿ ಚಂದ್ರಶೇಖರ ಆಳ್ವ ಹಾಗೂ  ಉಷಾ ಸಿ ಆಳ್ವಾ ದಂಪತಿಗಳ ಪುತ್ರಿ) ಅವರ ತಂಡ MULTI PURPOSE SOLAR DRYER ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ಪ್ರಥಮ ಸ್ಥಾನಗಳಿಸಿದೆ.

10ನೇ ತರಗತಿಯ ಅಭಿರಾಮ ಭಟ್ –  ( ನಾರಾಯಣ ಪ್ರಸಾದ್ ಪಿ.ಎಸ್ ಹಾಗೂ  ರಮ್ಯ ಕಾವೇರಿ ದಂಪತಿಗಳ ಪುತ್ರ) ಮತ್ತು  9ನೇ ತರಗತಿಯ ಅಜೇಯ ರಾಮ( ಕೇಶವ ಮೂರ್ತಿ ಹಾಗೂ  ಗೀತಾ ಲಕ್ಷ್ಮೀ ದಂಪತಿಗಳ ಪುತ್ರ) ಅವರ ತಂಡ BEE N NATURE ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

 ಈ ಸ್ಪರ್ಧೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 36 ತಂಡಗಳು ಭಾಗವಹಿಸಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ  2 ತಂಡಗಳು ಕಲಬುರ್ಗಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತವೆ. ಈ ಮೂಲಕ ಸತತ 14 ನೇ ಬಾರಿ ರಾಜ್ಯಮಟ್ಟಕ್ಕೆ  ಆಯ್ಕೆಯಾದ ಸಾಧನೆ ಸಂಸ್ಥೆಯ ವಿದ್ಯಾರ್ಥಿಗಳದ್ದಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here