ಬಿಜೆಪಿ ಗ್ರಾಮಾಂತರ ಮಂಡಲ, ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ 

0

ಬೂತ್ ಪ್ರವಾಸ ಕೈಗೊಳ್ಳುವಷ್ಟು ಪಕ್ಷ ಬಲಗೊಳ್ಳುತ್ತದೆ – ಸಂಜೀವ ಮಠಂದೂರು

ಪುತ್ತೂರು: ಪಕ್ಷಕ್ಕಾಗಿ ಸಮಯ, ಬೂತ್ ಪ್ರವಾಸ ಕೈಗೊಳ್ಳುವಷ್ಟು ಪಕ್ಷ ಬಲಗೊಳ್ಳುತ್ತದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

 

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜ.11 ರಂದು ನಡೆದ ಬಿಜೆಪಿ ಗ್ರಾಮಾಂತರ ಮಂಡಲ, ನಗರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ಪಕ್ಷ ಅಧಿಕಾರದಲ್ಲಿದೆ ಎಂದು ಕೂತಲ್ಲಿಯೇ ಪ್ರಚಾರ ಮಾಡಿದರೆ ಸಾಕಾಗುವುದಿಲ್ಲ. ಪ್ರಚಾರಕ್ಕಾಗಿ ಎಷ್ಟು ಸಮಯ ನೀಡುತ್ತೇವೋ, ಸಂಪರ್ಕ ಸಾಧಿಸುತ್ತೇವೋ, ಎಷ್ಟು ಬಾರಿ ಬೂತ್ ಪ್ರವಾಸ ಕೈಗೊಳ್ಳುತ್ತೇವೆಯೋ ಅಷ್ಟು ಸಂಘಟನೆ ಆಗುತ್ತದೆ. ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ ಎಂದರು.


ವಿಧಾನ ಪರಿಷತ್ ಸದಸ್ಯರು ಪ್ರತಾಪ್ ಸಿಂಹ ನಾಯಕ್ ಜನತೆಗೆ ಬಿಜೆಪಿ ಅನಿವಾರ್ಯತೆ ಇದೆ ಎಂದರು.
ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೆರಳೆ, ಭಾಜಪಾ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಬುಡಿಯೂರ್ ರಾಧಾಕೃಷ್ಣ ರೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಗನ್ನೀವಾಸ್ ರಾವ್, ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಪದಾಧಿಕಾರಿಗಳು, ನಗರ ಸಭಾ ಸದಸ್ಯರು,ಶಕ್ತಿ ಕೇಂದ್ರ ಪ್ರಮುಖರು,ಪ್ರಕೋಷ್ಟಗಳ ಪದಾಧಿಕಾರಿಗಳು, ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಯುವರಾಜ್ ಕೆ ಪೆರಿಯಾತ್ತೋಡಿ ಹಾಗೂ ಪುರುಷೋತ್ತಮ ಮುಂಗ್ಲಿಮನೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here