ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಜ.12ರಂದು ಬೆಳಿಗ್ಗೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನದ ಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ. ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.
ರಾಜೇಶ್ ಪಯಣಿಸುತ್ತಿದ್ದ ಬೈಕ್ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ರಾಜೇಶ್ ನದಿಗೆ ಎಸೆಯಲ್ಪಟ್ಟಿರಬಹುದೇ ಎಂಬ ಅನುಮಾನಗಳೂ ವ್ಯಕ್ತವಾಗಿದೆ.
ಇದೀಗ ಬಂಟ್ವಾಳ ನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.