ಕರುವೇಲು ಶ್ರೀರಾಮ ಭಜನಾ ಮಂದಿರದ ಗೌರವಾಧ್ಯಕ್ಷ ತಾರಾನಾಥರಿಗೆ ಶ್ರದ್ಧಾಂಜಲಿ

0

ಪುತ್ತೂರು: ದ.30ರಂದು ನಿಧನರಾದ ಬಿಳಿಯೂರು ಗ್ರಾಮದ ಕರುವೇಲು ಶ್ರೀರಾಮ ಭಜನಾ ಮಂದಿರದ ಗೌರವಾಧ್ಯಕ್ಷ ತಾರನಾಥ ಪಲಿಕೆರವರಿಗೆ ಉಪ್ಪಿನಂಗಡಿ ನೇತ್ರಾವತಿ ಸಭಾಭವನದಲ್ಲಿ ಜ.12ರಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.‌
ಶ್ರದ್ಧಾಂಜಲಿ ಸಭೆಯಲ್ಲಿ ತಾರಾನಾಥರವರ ಕುಟುಂಬಸ್ಥರಾದ ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲುರವರು ತಮ್ಮ ಕುಟುಂಬದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಾರಾನಾಥರವರು ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿದ್ದನ್ನು ಸ್ಮರಿಸಿದರು.
ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ತನಿಯಪ್ಪ ಪೂಜಾರಿ ಹೊಸಮನೆ ‌ಮಾತನಾಡಿ, ತಾರಾನಾಥರವರು ಗ್ರಾಮ ಪಂಚಾಯತ್ ಸದಸ್ಯರಾಗಿ, ಪೆರ್ನೆ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಭಜನಾ ಮಂದಿರದ ಅಧ್ಯಕ್ಷರಾಗಿ ಮತ್ತು ಕಲ್ಕುಡ ಕಲ್ಲುಟ್ಟಿ ದೈವಸ್ಥಾನದ ಗೌರವಾಧ್ಯಕ್ಷರಾಗಿ ಸಲ್ಲಿಸಿದ ಸೇವೆ ಹಾಗೂ ಕೆಲಸದಲ್ಲಿ ತೋರಿಸಿದ ಬದ್ಧತೆಯನ್ನು ಸ್ಮರಿಸಿದರು.
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ನಿವೃತ್ತ ಶಿಕ್ಷಕಿ ವಂದನಾ ಶರತ್ ಮುದಲಾಜೆ ಹಾಗೂ ತಾರಾನಾಥ ಪಲಿಕೆರವರ ಸಹೋದರರಾದ ಚಂದ್ರಶೇಖರ, ಕುಲಶೇಖರ್, ಅಮೃತ್, ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಕುಶಾಲಪ್ಪ ಹತ್ತುಕಳಸೆ, ಕಾರ್ಯದರ್ಶಿ ಪ್ರಸಾದ್ ಸುಪ್ರಭ ಪಚ್ಚಾಡಿ, ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ರೋಹಿತಾಕ್ಷ ಬಾನಬೆಟ್ಟು ಸಹಿತ ಹಲವರು ಭಾಗವಹಿಸಿದ್ದರು.
ಪ್ರವೀಣ್ ಮಾಡತ್ತಾರು ಕಾರ್ಯಕ್ರಮ‌ ನಿರೂಪಿಸಿದರು.

LEAVE A REPLY

Please enter your comment!
Please enter your name here