ರಾಮಕುಂಜ: ರಿಕ್ಷಾ-ಬೈಕ್ ಡಿಕ್ಕಿ- ಚರಂಡಿಗೆ ಬಿದ್ದ ರಿಕ್ಷಾ; ಇಬ್ಬರಿಗೆ ಗಾಯ

0

ರಾಮಕುಂಜ: ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾ ಚರಂಡಿಗೆ ಬಿದ್ದ ಪರಿಣಾಮ ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜ.10ರಂದು ರಾಮಕುಂಜದಲ್ಲಿ ನಡೆದಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರಾಗಿದ್ದಾರೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ ನಿವಾಸಿ ಕೂಸಪ್ಪ ಎಂಬವರನ್ನು ಪ್ರಯಾಣಿಕರಾಗಿ ಕುಳ್ಳಿರಿಸಿಕೊಂಡು ರಾಮಕುಂಜ ಗ್ರಾಮದ ಅಂಬೇಡ್ಕರ್ ನಗರದ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿರುವಾಗ ಎದುರಿನಿಂದ ವಿಜಯ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ (KA-21-EA-1315) ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಿಂದಾಗಿ ಆಟೋ ರಿಕ್ಷಾ ರಸ್ತೆಯ ಎಡ ಬದಿಯ ಚರಂಡಿಗೆ ಬಿದ್ದ ಪರಿಣಾಮ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಹಾಗೂ ಕೂಸಪ್ಪರವರು ಗಾಯಗೊಂಡಿದ್ದು, ಇವರನ್ನು ಬೈಕ್ ಸವಾರ ವಿಜಯ್ ಹಾಗೂ ಸ್ಥಳದಲ್ಲಿದ್ದ ಸಾರ್ವಜನಿಕರು ಉಪಚರಿಸಿ ಚಿಕಿತ್ಸೆಗಾಗಿ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತಂದು ದಾಖಲಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ನೀಡಿರುವ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಕಲಂ: 279, ೩೩೭337, ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here