ಪುತ್ತೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ-2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ಜೀವನ್ ಮಿಷನ್ ಯೋಜನೆಯಡಿಯಲ್ಲಿ ಉಪ್ಪಿನಂಗಡಿ ಸರಕಾರಿ ಪ್ರೌಡಶಾಲೆಯ ಮಕ್ಕಳಿಗೆ ನೀರಿನ ಗುಣಮಟ್ಟ ಪರೀಕ್ಷೆ ಮಾಡುವ FTK ತರಬೇತಿ ಆಯೋಜಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕಿಯರು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಬಾಗವಹಿಸಿದ್ದರು. ಗ್ರಾಮ್ಸ್ ರಾಯಚೂರು ಸಂಸ್ಥೆಯ, ಜಲ ಜೀವನ್ ಮಿಷನ್ ಸಮುದಾಯ ಸಂಘಟಕ ರವೀಶ ಎ. ಆಯೋಜಿಸಿ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಲಾಯಿತು. ಮಕ್ಕಳಿಗೆ ನೀರಿನ ಗುಣಮಟ್ಟ ಪರೀಕ್ಷೆಯ ಮಹತ್ವ ತಿಳಿಸಲಾಯಿತು. ಮಕ್ಕಳ ಜೊತೆ ಸಂವಾದ ನಡೆಸಲಾಯಿತು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.